Kannada, Kannadiga, Kannadigaru, Karnataka,

Kannadigarella ondaagi Kannadavannu ulisona, kalisona and belesona

74th akhila baaratha kannada saahitya sammelana UDUPI

ಆತ್ಮೀಯರೇ,


೭೪ ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಅವರ ಅಧ್ಯಕ್ಷತೆಯಲ್ಲಿ ೨೦೦೭ ಡಿಸೆಂಬರ್ ೧೨ ರಿಂದ ೧೫ ರವರೆಗೆ ಉಡುಪಿಯ ಎಂ.ಜಿ.ಎಂ ಕಾಲೇಜಿನ ಎ.ಎಲ್.ಎನ್.ರಾವ್ ಸ್ಮಾರಕ ಕ್ರೀಡಾಂಗಣದಲ್ಲಿ ನಡೆಯಲಿದೆ, ತಾವುಗಳು ಇದರಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿ

74th Kannada Sammelana UDUPI
http://picasaweb.google.com/vmkumaraswamy/74thKannadaSammelanaUDUPI?authkey=ISOWb45MQHE

ಧನ್ಯವಾದಗಳು……

With Warm Regard’s

AVINASH BHAT

December 12, 2007 Posted by | 74th UDUPI Sammelana | Leave a comment

ರತ್ನನ ಪರ್ಪಂಚ

images4.jpg

ಯೇಳ್ಕೊಳ್ಳಾಕ್ ಒಂದ್ ಊರು
ತಲೇಮೇಗ್ ಒಂದ್ ಸೂರು
ಮಲಗಾಕೆ ಬೂಮ್ತಾಯಿ ಮಂಚ;
ಕೈ ಯಿಡದೋಳ್ ಪುಟ್ನಂಜಿ
ನೆಗನೆಗತ ಉಪ್ಗಂಜಿ
ಕೊಟ್ರಾಯ್ತು ರತ್ನನ್ ಪರ್ಪಂಚ!

ಅಗಲೆಲ್ಲ ಬೆವರ್ ಅರ್ಸಿ
ತಂದದ್ರಲ್ಲ್ ಒಸಿ ಮುರ್ಸಿ
ಸಂಜೇಲಿ ವುಳಿ ಯೆಂಡ ಕೊಂಚ
ಯೀರ್ತ ಮೈ ಝುಂ ಅಂದ್ರೆ
ವಾಸ್ನೆ ಘಂ ಘಂ ಅಂದ್ರೆ
ತುಭೋಯ್ತು ರತ್ನನ್ ಪರ್ಪಂಚ!

ಏನೋ ಕುಸಿಯಾದಾಗ
ಮತ್ತ್ ಎಚ್ಚಿ ಓದಾಗ
ಅಂಗೇನೆ ಪರಪಂಚದ್ ಅಂಚ
ದಾಟ್ಕಂಡಿ ಆರಾಡ್ತ
ಕನ್ನಡದಲ್ ಪದವಾಡ್ತ
ಇಗ್ಗೋದು ರತ್ನನ್ ಪರ್ಪಂಚ!

ದುಕ್ಕಿಲ್ಲ ದಾಲಿಲ್ಲ
ನಮಗ್ ಅದರಾಗ್ ಪಾಲಿಲ್ಲ
ನಾವ್ ಕಂಡಿಲ್ಲ್ ಆ ತಂಚ ವಂಚ;
ನಮ್ಮಸ್ಟಕ್ ನಾವಾಗಿ
ಇದ್ದಿದ್ರಲ್ಲ್ ಆಯಾಗಿ
ಬಾಳೋದು ರತ್ನನ್ ಪರ್ಪಂಚ!

‘ಬಡತನ ಗಿಡತನ
ಏನಿದ್ರೇನ್ ? ನಡೆತೇನ
ಚೆಂದಾಗ್ ಇಟ್ಕೊಳ್ಳಾದೆ ಅಚ್ಛ!’ –
ಅಂದ್ಕೊಂಡಿ ಸುಕವಾಗಿ
ಕಸ್ಟಕ್ ನೆಗಮೊಕವಾಗಿ
ನೆಗೆಯೋದೆ ರತ್ನನ್ ಪರ್ಪಂಚ!……

– ಜಿ ಪಿ ರಾಜರತ್ನಂ

December 12, 2007 Posted by | EKAVI Group | Leave a comment